ಶ್ರೀ ರಮೇಶ ಎಂ.ಎಚ್ ರವರು ಮೂಲತಃ ಸ್ಥಳೀಯ ಮುದ್ದಯ್ಯನಪಾಳ್ಯದವರಾದ ಕೃಷಿ ಹಿನ್ನೆಲೆಯುಳ್ಳ ಕುಟುಂಬದ ಶ್ರೀ ಹನುಮಯ್ಯ ಹಾಗೂ ಶ್ರೀಮತಿ ಚಿಕ್ಕಹನುಮಕ್ಕ ದಂಪತಿಗಳಿಗೆ ಹಿರಿಯ ಮಗನಾಗಿ ಜನಿಸಿರುತ್ತಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ಮುದ್ದಯ್ಯನಪಾಳ್ಯದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪೂರ್ಣಗೊಳಿಸಿರುತ್ತಾರೆ. 2002 ರಲ್ಲಿ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದು, ನಂತರ 2004 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಸಮಾಜಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿರುತ್ತಾರೆ. 2008 ಮತ್ತು 2009 ರ ಅವಧಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ, ಸಮಾಜಕಾರ್ಯ ವಿಭಾಗದ ಸಂಯೋಜಿತ ಅನುಪಮಾ ಕಾಲೇಜಿನ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸಿರುತ್ತಾರೆ. ಸಮಾಜಸೇವಾ ಕಾರ್ಯಗಳಲ್ಲಿ ಅಪಾರವಾದ ಆಸಕ್ತಿಯನ್ನು ಹೊಂದಿದ್ದು, ನಿರಾತಂಕ ಎಂಬ ಸ್ವಯಂ ಸೇವಾ ಸಂಸ್ಥೆಯನ್ನು 2007 ರಲ್ಲಿ ಪ್ರಾರಂಭಿಸಿದರು. ಇವರ ಸಮಾಜಸೇವಾ ಆಶಯದ ಕಲ್ಪನೆಗಳನ್ನು ನಿರಾತಂಕ ಸಂಸ್ಥೆಯ ಮೂಲಕ ಕೈಗೊಂಡು ಅನೇಕ ಸಮಾಜಮುಖಿ ಕಾರ್ಯಗಳನ್ನು ಸಮಾಜಕ್ಕೆ ತಲುಪಿಸಿದ್ದಾರೆ. ಅನೇಕ ಪ್ರಗತಿಪರ ಚಿಂತಕರು ಮತ್ತು ಹಿರಿಯ ಸಮಾಜಕಾರ್ಯ ವೃತ್ತಿಪರರು ಸಮಾಜಸೇವಾ ಚಟುವಟಿಕೆಗಳಲ್ಲಿ ನಿರಾತಂಕ ಸಂಸ್ಥೆಗೆ ಮಾರ್ಗದರ್ಶನವನ್ನು ನೀಡಿ, ಪ್ರೋತ್ಸಾಹಿಸಿದ್ದಾರೆ.
ಪ್ರಶಸ್ತಿಗಳು
ಪ್ರಶಸ್ತಿಗಳು
- “ನಾಗರೀಕ ನಾಯಕತ್ವ ತರಬೇತಿ (B.Clip)”ಯನ್ನು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (B.PAC) ರವರಿಂದ 2014 ರಲ್ಲಿ ಪಡೆದುಕೊಂಡಿದ್ದಾರೆ.
- ನ್ಯಾಷನಲ್ ಅಸೋಸಿಯೇಷನ್ ಆಫ್ ಪ್ರೊಫೆಷನಲ್ ಸೋಷಿಯಲ್ ವರ್ಕರ್ಸ್ ಇನ್ ಇಂಡಿಯಾ (NAPSWI) ರವರು 2019 ನೇ ಸಾಲಿನ “ಯುವ ಸಾಧಕ ಪ್ರಶಸ್ತಿ” ಯನ್ನು ನೀಡಿದ್ದಾರೆ.
- 2014 ರಲ್ಲಿ ನಡೆದ ಬೆಂಗಳೂರು ಯುವ ಜನೋತ್ಸವದಲ್ಲಿ “ಬೆಂಗಳೂರು ಯುವ ಪ್ರಶಸ್ತಿ”ಯನ್ನು ಪಡೆದುಕೊಂಡಿದ್ದಾರೆ.
- ಬೆಂಗಳೂರಿನ ನ್ಯಾಷನಲ್ ಕಾಲೇಜ್ ವತಿಯಿಂದ 2003 ರಲ್ಲಿ ಸಮಾಜಶಾಸ್ತ್ರದಲ್ಲಿ ಅತ್ಯುನ್ನತ ಪ್ರಾವೀಣ್ಯತೆಗಾಗಿ “ಡಾ. ಮರ್ತುವ್ಕುಡಿ ಆರ್ ವೆಂಕಟಮ್ಮ ಸ್ಮಾರಕ ಪ್ರಶಸ್ತಿ”ಯನ್ನು ನೀಡಿದ್ದಾರೆ.
ಉಲ್ಲಾಳು ವಾರ್ಡಿನ ಸಮಸ್ತ ನಾಗರೀಕರನ್ನು ಒಂದೇ ವೇದಿಕೆಯಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಸಮಾಜದ ವಿವಿಧ ಕ್ಷೇತ್ರದ 50,000 ಕ್ಕೂ ಹೆಚ್ಚು ಸದಸ್ಯರು ನಿರಾತಂಕ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಒಡನಾಟದಲ್ಲಿದ್ದಾರೆ. ಹಲವಾರು ಸಮಾಜ ಸೇವಾ ಕಾರ್ಯಗಳಲ್ಲಿ ನಿರಾತಂಕ ಸಂಸ್ಥೆಗೆ ಬೆಂಬಲವನ್ನು ನೀಡುತ್ತಿದ್ದಾರೆ. ತಾವೂ ಕೂಡ ನಮ್ಮೊಂದಿಗೆ ಕೈ ಜೋಡಿಸಲು ಮತ್ತು ಬೆಂಬಲಿಸಲು “8088433026” ನಂಬರ್ಗೆ “NIRATHANKA” ಎಂದು ಸಂದೇಶವನ್ನು ಕಳುಹಿಸಿಕೊಡಬಹುದು ಅಥವಾ QR Code ಸ್ಕ್ಯಾನ್ ಮಾಡಿ ಗುಂಪಿಗೆ ಸೇರಿಕೊಳ್ಳಬಹುದು.
ನ್ಯಾಷನಲ್ ಅಸೋಸಿಯೇಷನ್ ಆಫ್ ಪ್ರೊಫೆಷನಲ್ ಸೋಷಿಯಲ್ ವರ್ಕರ್ಸ್ ಇನ್ ಇಂಡಿಯಾ (NAPSWI) ವತಿಯಿಂದ “ಯಂಗ್ ಅಚೀವರ್ಸ್ ಅವಾರ್ಡಿ-2019” ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ
ಸಮಾಜಕಾರ್ಯ ಹಾಗೂ ಮಾನವ ಸಂಪನ್ಮೂಲ ಕ್ಷೇತ್ರದ ಸಮಾನ ಮನಸ್ಕ ವೃತ್ತಿಪರರೊಂದಿಗೆ ಸೇರಿ ಕರ್ನಾಟಕದಲ್ಲಿ ಮೊದಲ ಬಾರಿಗೆ “ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ” ವನ್ನು 2017 ರಲ್ಲಿ ಪ್ರಾರಂಭಿಸಿ ವಾರ್ಷಿಕವಾಗಿ ಸಮ್ಮೇಳನವನ್ನು ಆಯೋಜಿಸುತ್ತಾ ಬಂದಿದೆ. ಈ ಸಮ್ಮೇಳನಕ್ಕೆ ಕರ್ನಾಟಕ ರಾಜ್ಯದ 300ಕ್ಕೂ ಹೆಚ್ಚು ಮಾನವ ಸಂಪನ್ಮೂಲ ವೃತ್ತಿನಿರತರು ಆಗಮಿಸುತ್ತಾರೆ.
SOCIAL MEDIA FEEDS
Twitter Feed
Instagram Feed
LinkedIn Feed