ಬೀದಿಯಲ್ಲಿ ನೋಡಿದ್ದು ಒಂದೇ ಸಾವು,
ಆ ಮನದಲ್ಲಿ ತುಂಬಿ ಮಡುಗಟ್ಟಿತು ನೋವು, ಪ್ರಶ್ನೆಗಳು ಉದ್ಭವಿಸಿದವು ಹಲವು ಹಲವು, ಜ್ಞಾನೋದಯದೆಡೆಗೆ ನಡೆಸಿದವು. ಒಂದೇ ದಿನ ಸಾಕಾಯಿತು ಜಗದ ಸಂಕಷ್ಠವನು ಅಳೆದು ನೋಡಲು ಒಂದೇ ಸಾವು ಸಾಕಾಯಿತು ಸಿದ್ದಾರ್ಥ ಬುದ್ಧನಾಗಲು ದಿನವಿಡೀ ನೋಡುತ್ತಿದ್ದೇವೆ ನಾವು ಸಾಲು ಸಾಲು ಸಾವು ನಮ್ಮಲ್ಲಿ ಮಡುಗಟ್ಟಬಹುದೆ ನೋವು? ಪ್ರಶ್ನೆಗಳೇಳುತಿಹವೆ ಹಲವು ಹಲವು ಜ್ಞಾನೋದಯ ಬುದ್ಧನಿಗೆ ಜ್ಞಾನ ಜಗದಗಲಕೆ ಸತ್ಯ ಅಹಿಂಸೆಗಳ ಕೊಡುಗೆ ಜಗಕೆ ಹುಡುಕಿದರೆ ಸಿಗಬಹುದೆ ನಮ್ಮೊಳಗೆ ಎಲ್ಲಿದ್ದೇವೆ ನಾವು ನಾಗರೀಕತೆಯ ನೆಪದಲಿ? ತಂತ್ರಜ್ಞಾನದ ಬೆಳಕಿನ ಕತ್ತಲಲ್ಲಿ ಎಲ್ಲವನ್ನು ಮಾರಾಟ ಮಾಡುವ ವ್ಯವಹಾರಿಕತೆಯಲಿ ಮಾನವೀಯತೆಯನ್ನು ಮುಚ್ಚಿಡುತ ಮನದಲ್ಲಿ ಎಲ್ಲಿದ್ದೇವೆ ನಾವು? ಎಲ್ಲಿದ್ದೇವೆ ಎಲ್ಲಿದ್ದೇವೆ? ರಮೇಶ ಎಂ.ಎಚ್. ನಿರಾತಂಕ #ನಿರಾತಂಕಕವನ
0 Comments
Leave a Reply. |
Categories
All
RAMESHA NIRATANKA ಉಲ್ಲಾಳು ವಾರ್ಡಿನ ಸಮಸ್ತ ನಾಗರೀಕರನ್ನು ಒಂದೇ ವೇದಿಕೆಯಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಸಮಾಜದ ವಿವಿಧ ಕ್ಷೇತ್ರದ 50,000 ಕ್ಕೂ ಹೆಚ್ಚು ಸದಸ್ಯರು ನಿರಾತಂಕ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಒಡನಾಟದಲ್ಲಿದ್ದಾರೆ. ಹಲವಾರು ಸಮಾಜ ಸೇವಾ ಕಾರ್ಯಗಳಲ್ಲಿ ನಿರಾತಂಕ ಸಂಸ್ಥೆಗೆ ಬೆಂಬಲವನ್ನು ನೀಡುತ್ತಿದ್ದಾರೆ. ತಾವೂ ಕೂಡ ನಮ್ಮೊಂದಿಗೆ ಕೈ ಜೋಡಿಸಲು ಮತ್ತು ಬೆಂಬಲಿಸಲು “8088433026” ನಂಬರ್ಗೆ “NIRATHANKA” ಎಂದು ಸಂದೇಶವನ್ನು ಕಳುಹಿಸಿಕೊಡಬಹುದು.
|